Wednesday, July 09, 2008

ಸದಾಸಂ ಮಾರಾಟ

ನನಗೆ ಉಪಯೋಗಿಸಲು ಬೇಕಾದದ್ದು ಒಂದು ಸದಾಸಂ. ಇನ್ನೇನು ತರಿಸಲು ಹಣ ಕಳುಹಿಸುವುದು ಎನ್ನುವ ಕೊನೆ ಹಂತದ ಸನ್ನಿವೇಶದಲ್ಲಿ ಅವರು ಹಾಕಿದ ಬಾಂಬು ನಮ್ಮಲ್ಲಿ ಚಿಲ್ಲರೆ ವ್ಯಾಪಾರ ಇಲ್ಲ. ಇವರಿಂದ ಬೇಡ ಎಂದು ನಾನು ಕಾಲು ಹಿಂದೆ ಇಟ್ಟರೆ ನನಗೆ ಅದೇ ವರ್ಷದ ಮಳೆಗಾಲದಲ್ಲಿ ಸದಾಸಂ ಉಪಯೋಗ ಮಾಡಿನೋಡಲು ಅಸಾದ್ಯ.

ಸೋಲುತ್ತಿರುವ ದೇಹದಿಂದಾಗಿ ಮಳೆಗಾಲದಲ್ಲಿ ತೋಟಕ್ಕೆ ಹೋಗುವುದು ಕೃಷಿಕನಾಗಿ ಉಳಿಯುವುದರ ಪ್ರಶ್ನೆಯಾಗುತ್ತಲಿತ್ತು. ಗುಣ ದೋಷಗಳನ್ನೆಲ್ಲ ಅವಲೋಕಿಸಿ ಅವರಿಗೆ ಹಣ ಕಳುಹಿಸಿದೆ. ಐದು ಯಂತ್ರಗಳು ನಮ್ಮ ಅಂಗಳದಲ್ಲಿ ಬಂದಿಳಿದವು. ನನಗೆ ಒಂದು ಉಪಯೋಗಕ್ಕೂ ಮತ್ತೊಂದು ಅಗತ್ಯವಾದರೆ ಬಿಡಿ ಬಾಗಗಳಿಗೂ ಇಟ್ಟುಕೊಳ್ಳುವ ಆಲೋಚನೆ ಮಾಡಿದೆ. ಉಳಿದವುಗಳ ಅವುಗಳ ಬಗ್ಗೆ ಅರಿವಿದ್ದ ಹಾಗೂ ಅಗತ್ಯವಿದ್ದವರು ಸಿಕ್ಕರೆ ಕೊಡುವುದೆಂದು ತೀರ್ಮಾನಿಸಿದೆ.

ಚೀನಾ ಮಾಲು. ಹೇಗುಂಟೋ ? ಪ್ರಶ್ನೆಗಳು ನಮ್ಮ ಎದುರಾಗುತ್ತವೆ. ಇದರ ಬಗೆಗೆ ಯಾರೂ ನನ್ನನ್ನು ದೂರುವುದು ನನಗೆ ಬೇಕಿರಲಿಲ್ಲ. ಹಾಗಾಗಿ ಗುಣಮಟ್ಟ ಬಗ್ಗೆ ನನಗೆ ಖಾತರಿಯಾದ ನಂತರವೇ ಮಾರಾಟ ಎಂದು ನಾನು ತೀರ್ಮಾನಿಸಿದ್ದೆ. ಈಗ ಹನ್ನೊಂದು ತಿಂಗಳ ಉಪಯೋಗ ನನಗೆ ಇದರ ಗುಣಮಟ್ಟದ ಬಗ್ಗೆ ದೈರ್ಯ ಕೊಟ್ಟಿದೆ. ಸಾಮಾನ್ಯ ಬದಲಿಸುವಂತಹ ಎಲ್ಲ ಸಾಮಾನುಗಳು ನಮ್ಮ ದ್ವಿ-ಚಕ್ರ ವಾಹನಗಳ ಬಿಡಿ ಬಾಗಗಳು ಹೊಂದುತ್ತವೆ.

ಬಾಯಾರಿದವನಿಗೆ ನೀರಿನ ರುಚಿ ಎಂಬಂತೆ ನನ್ನಂತಹ ವ್ಯಕ್ತಿಗಳಿಗೆ ನನ್ನ ಮೊದಲ ಅಧ್ಯತೆ. ಇವು ನಮ್ಮ ದೇಶದಲ್ಲಿ ತಯಾರಾಗುವುದಿಲ್ಲ. ವ್ಯಾಪಾರಿಗಳು ಹೇಳಿದ್ದೇ ಕ್ರಯ. ಒಂದೆರಡು ವಾಹನಗಳ ಪರದೇಶದಿಂದ ತರಿಸುವುದು ನಿಜಕ್ಕೂ ತಲೆಹರಟೆ ಕೆಲಸ. ನನಗೆ ಹೃದಯ ಚಿಕಿತ್ಸೆ ಆಗಿದೆ, ತೋಟಕ್ಕೆ ಹೋಗಲು ಸಾದ್ಯವಾಗುತ್ತಿಲ್ಲ ಎಂದೊಬ್ಬರು ಪರರಾಜ್ಯದಿಂದ ಪತ್ರಿಸಿದ್ದರು. ಅವರಿಗೆ ಸೂಕ್ತ ಸಲಹೆ ಸೂಚನೆಗಳನ್ನಿತ್ತೆ. ಅದುದರಿಂದ ನನ್ನಂತವರು ಸಂಪರ್ಕಿಸಿದರೆ ಅವರಿಗಾಗಿ ಉಳಿಯಲಿ ಎನ್ನುವ ನೆಲೆಯಲ್ಲಿ ಮಾರಾಟಕ್ಕೆ ಹೆಚ್ಚು ಆಸಕ್ತಿ ವಹಿಸುತ್ತಿಲ್ಲ.

ಹಾಗೆಂದು ಇವುಗಳಿಗೆ ಇರಬಹುದಾದ ಮಾರುಕಟ್ಟೆ ಬಹಳ ಸಿಮಿತವಾದುದು. ತಿಂಗಳಿಗೆ ಹತ್ತಾರು ಮಾರುವಂತಹ ವಾಹನ ಇದಲ್ಲ. ಪರಿಸರಕ್ಕೆ ಹಾನಿ ಮಾಡುವ ವಾಹನಗಳು ಸಾಮಾನ್ಯವಾಗಿ ನನಗೆ ಸಮ್ಮತವಲ್ಲವಾದರೂ ಇವು ಅಂಗವಿಲಕರ ಗಾಲಿ ಕುರ್ಚಿಯ ತರಗತಿಗೆ ಸೇರುವಂತಹದ್ದು ಎನ್ನುವ ಸಮದಾನ.


ವಾರಂಟಿ, ಕಸ್ಟಮರ್ ಸಪೋರ್ಟ್ ಎಂದು ತಲೆಕೆಡಿಸಿಕೊಳ್ಳಲು ನನಗೆ ಅಸಕ್ತಿಯಾಗಲಿ ಸಮಯವಾಗಲಿ ಇಲ್ಲ. ನಮ್ಮ ತೋಟಕ್ಕೆ ಹೋಗಲು ಕಷ್ಟ ಪಡುವವ ಇದನೆಲ್ಲ ಎಳೆದಾಕಿಕೊಳ್ಳುವ ಉಸಾಬರಿ ನನಗೇತಕೆ ?













ನನ್ನ ದೋರಣೆ ಅನಿಸಿಕೆಗಳ ರೀತಿಯಲ್ಲಿಯೇ ಈ ವ್ಯಂಗ್ಯ ಚಿತ್ರ ಕಂಡು ಅನಿಸಿಕೆ ಹಾಗೂ ಚಿತ್ರ ಎರಡನ್ನೂ ಹಂಚಿಕೊಳ್ಳುತ್ತಿದ್ದೇನೆ.

ಕೊನೆ ಮಾತು : ತಲೆಬರಹವೇ ಒಗಟಿನಂತಿದೆ ಎಂದು ಹೇಳಿಸಿಕೊಂಡ ನಂತರ ಈ ವಿವರಣೆ. ಇಂಗ್ಲೀಷಿನಲ್ಲಿ ATV ಯೆಂದು ಕರೆಸಿಕೊಳ್ಳುವ ವಾಹನಕ್ಕೆ ಹೆಸರು ಸದಾಸಂ ಸಕಲ ದಾರಿ ಸಂಚಾರಿ ಎಂಬ ಕನ್ನಡದ ನಾಮಕರಣ ಶ್ರೀಪಡ್ರೆಯವರು ಟಂಕಿಸಿದ್ದು.

ಅಲ್ಲೂ  ಉಂಟು:  ಸದಾಸಂ

1 comment:

Prasad Yerumbu said...

ಸದಾಸ೦ನ ವಿಷಯ ಬರದ್ದು ಲಾಯಿಕಾಯಿದು...ಆದರೆ ಪೂರ್ತಿ ವಿಷಯ ಇಲ್ಲೆ...ಅ೦ದರೆ ಅಡಿಕೆ ಪತ್ರಿಕೆಲಿ ಬರದ ಹಾ೦ಗೆ(ಹಿ೦ದಾಣ blog ಲಿ ಇದ್ದು,ಆದರೆ ನಮ್ಮ ಜನಕ್ಕೆ ಮರವದು ಜಾಸ್ತಿ..ಮತ್ತೆ ವಿವರ ತಿಳಿವಲೆ ವಾಪಾಸು ಹಿ೦ದಾಣ blog ನೊಡುವ ಅಭ್ಯಾಸ ಕಮ್ಮಿ...)