Tuesday, December 18, 2012

ನಮಗೆ ಬಂದೂಕು ಸಂಸ್ಕೃತಿ ಬೇಕಾ ?


ಮೊನ್ನೆ  ಅಮೇರಿಕದ  ಶಾಲೆಯೊಂದರೆ  ಇಪ್ಪತ್ತು ಮಕ್ಕಳ ಮತ್ತು  ಆರು   ಟೀಚರುಗಳ  ಕಗ್ಗೊಲೆ ಪ್ರಕರಣ  ಓದುವಾಗ  ನೆನಪಾಯಿತು -  ಒಂದು  ಹಳೆಯ   ಸಂಬಾಷಣೆ.  ಅಮೇರಿಕದ   ಆತ್ಮೀಯ  ಗೆಳೆಯ    ಎರಿಕ್  ಕೇಳಿದ “ ಭಾರತಿಯರು ಅಮೇರಿಕನರ    ಬಗೆಗೆ  ಯಾವ ಅಬಿಪ್ರಾಯ  ಹೊಂದಿದ್ದಾರೆ ? “  ಈ  ಮಹರಾಯನಿಗೆ   ನನ್ನ  ಕೆಣಕುವ  ಹವ್ಯಾಸ.    ನಾನು  ನಗುತ್ತಾ ಉತ್ತರಿಸಿದೆ. “ ಎಲ್ಲರೂ  ಕೋವಿ    ಇಟ್ಟುಕೊಂಡಿರುತ್ತಾರೆ. ಕೆಲವರು  ಎರಡನ್ನು.”  ಆಗ  ಕೈಗಳನ್ನು   ಮೇಲೆತ್ತಿ  ಹೇಳಿದ  ಎರಿಕ್ ನೋಡಯ್ಯಾ  ನನ್ನಲ್ಲಿಲ್ಲ.  ಹಾಗಾದರೆ  ಎಲ್ಲ  ಅಮೇರಿಕದವರೂ  ಕೋವಿ ಇಟ್ಕೊಂಡಿರ್ತಾರೆ  ಅನ್ನುವುದು  ತಪ್ಪು  ಆಲೋಚನೆನಾ  ? 




ಅಲ್ಲ   ನಮಗೆ  ಆ  ಭಾವನೆ  ಬರುವುದು  ಸಹಜ.    ಯಾಕೆಂದರೆ   ಪ್ರತಿ ವರ್ಷ  ಅಮೇರಿಕದಲ್ಲಿ   ಮೂವತ್ತು  ಸಾವಿರಕ್ಕೂ  ಹೆಚ್ಚು ಜನ   ಗುಂಡು ಬಡಿದು  ಸಾಯುತ್ತಾರೆ.  ಅದರಲ್ಲಿ  ಬಹುಪಾಲು  ಸತ್ತವರಿಗೂ  ಗುಂಡಿಕ್ಕಿದವರಿಗೂ  ಪರಿಚಯನೇ  ಇರೋದಿಲ್ಲ.     ಮೊನ್ನೆ  ಅಮೇರಿಕ್ದಲ್ಲಿ   ಶಾಲಾ  ದಾಳಿಯ ದಿನವೇ   ದೇಶದ  ಇನ್ನೊಂದು ಬಾಗದಲ್ಲಿ  ಒಬ್ಬ      ಎಲ್ಲರನ್ನೂ  ಉಡಾಯಿಸ್ ಬಿಡ್ತೇನೆ  ಅಂತ   ಬೆದರಿಸಿದ್ದ.   ಈ    ಅರೆ ಹುಚ್ಚನನ್ನು  ಪೋಲಿಸರು ವಶಕ್ಕೆ  ತೆಗೆದುಕೊಂಡಾಗ     ೪೭  ಕೋವಿಗಳೂ  ಅಪಾರ  ಮದ್ದುಗುಂಡುಗಳೂ  ಅವನ ಮನೆಯಲ್ಲಿದ್ದವು.   ಅವನ  ಮನೆಯಲ್ಲಿ  ಸುಮಾರು  ನಮ್ಮ  ಹಣದಲ್ಲಿ ಹೇಳೊದಾದ್ರೆ  ಐವತ್ತೈದು ಲಕ್ಷ  ರೂಪಾಯಿ  ಮೌಲ್ಯದ   ಸ್ಪೋಟಕ    ಮಾಲು    ಅವನಲ್ಲಿತ್ತು. 

ಆ  ದೇಶದಲ್ಲಿ  ಕೋವಿ ಪರವಾದ  ಲಾಬಿ  ರಾಜಕೀಯವಾಗಿ   ಬಹಳ  ಶಕ್ತಿವಂತವಾಗಿದ್ದು  ಹೆಚ್ಚಿನ   ಬೆಂಬಲವಿದ್ದುದು   ಮೊನ್ನೆ  ಸೋತ  ಆನೆ  ಪಕ್ಷದವರದು.    ಏನಾದರೂ   ಗಲಾಟೆ ನಡೆದಾಗ  ಸಂಬಂದಿಸಿದವರ  ಟಿವಿ  ಚರ್ಚೆಗೆ  ಅಹ್ವಾನಿಸುವ  ಸಂಪ್ರದಾಯ  ನಮ್ಮಲ್ಲಿರುವಂತೆ  ಅಲ್ಲೂ  ಇದೆ.   ಹಾಗೆ  ಮೂವತ್ತ ಒಂದು   ಕೋವಿವಾದಿ    ರಾಜಕಾರಣಿಗಳಿಗೆ  ಅಹ್ವಾನ  ಹೋದರೂ  ಯಾರೂ  ಸ್ವೀಕರಿಸಲಿಲ್ಲ.   ಎಲ್ಲರೂ  ಮಾದ್ಯಮದಿಂದ  ಅಡಗಿದ್ದಾರೆ.   ಅಲ್ಲಿನ   ಪತ್ರಿಕೆಯೊಂದರಲ್ಲಿ   ಸುದ್ದಿ  ಮತ್ತು   ಕ್ರಿಸ್ ಮಸ್  ಪ್ರಯುಕ್ತ   ರೀಯಾಯತಿ     ಕೋವಿ  ಮಾರಾಟದ ಜಾಹಿರಾತು  ಸಲೀಸಾಗಿ ಅಕ್ಕಪಕ್ಕದಲ್ಲಿ ಹಾಕಿರುವುದನ್ನು  ನೋಡಬಹುದು.     ಒಬಾಮ  ಪಕ್ಷದ  ಹೆಚ್ಚಿನವರು    ಬೆಂಬಲಿಸುವ  ಕೋವಿ ವಿರೋದಿ  ಕಾನೂನು ಅಲ್ಲಿ  ಬೇಗದಲ್ಲಿ   ಜಾರಿಗೆ ಬರಲೆಂದು  ಆಶೀಸೋಣ.   ತಡವಾದರೆ  ಪುನಹ  ’ ಕೋವಿವಾದಿಗಳು  ’   ಒಗ್ಗಟ್ಟಾಗಿ   ಅವರದೇ    ಕೈ ಮೇಲಾಗುತ್ತದೆ.





ನಮ್ಮನೆಯಲ್ಲೂ   ಒಂದು ಕೋವಿ ಇತ್ತು.     ನನ್ನ  ಅಜ್ಜ   ಅಂದರೆ  ಅಪ್ಪನ  ಚಿಕ್ಕಪ್ಪ ೧೯೨೮ರಲ್ಲಿ  ಮದ್ರಾಸಿನಲ್ಲಿ ನಡೆದ  ಕಾಂಗ್ರೇಸ್  ಅಧಿವೇಶನಕ್ಕೆ  ಹೋಗಿದ್ದರು.  ಹೋದ  ನೆನಪಿಗೆ   ಎನಾದರೂ  ತರಬೇಕಲ್ಲ.    ಹಾಗೆ    ಬರುವಾಗ ತಂದದ್ದು ಒಂದು ಒಂಟಿ ನಳಿಗೆ  ಕೋವಿ.  ಮಕ್ಕಳಿಲ್ಲದೆ  ಅವರು  ತೀರಿಕೊಂಡಾಗ  ಅಜ್ಜಿ  ಅದನ್ನು ನನ್ನಪ್ಪನ  ವಶಕ್ಕೊಪ್ಪಿಸಿದರು.  ಪರಿಣಾಮವಾಗಿ     ನನ್ನಪ್ಪನೂ  ಕೋವಿ ಲೈಸೆನ್ಸ್ ದಾರರಾದರು.  

ನನ್ನ ಹುಚ್ಚಾಟ  ತಿರುಗಾಟವೆಲ್ಲ  ಮುಗಿದು ಮನೆಯಲ್ಲಿ ಕೃಷಿ ಸಹಾಯಕ್ಕೆ  ತೊಡಗಿಸಿಕೊಂಡಿದ್ದೆ.  ಆ ಸಮಯ  ಕೋವಿ ಪರವಾನಿಗೆ  ನವೀಕರಣ  ಸಮಯವಾಯಿತು.  ನನ್ನಲ್ಲಿ ಅಪ್ಪ  ಹೇಳಿದರು – ನನಗೆ ವಯಸ್ಸಾಯಿತು.   ಕೋವಿ ಲೈಸೆನ್ಸ್  ಇನ್ನು    ನಿನ್ನ ಹೆಸರಿಗೆ ಮಾಡುತ್ತೇನೆ.  ಅಗ  ನಾನು,   " ಅದರಲ್ಲಿ ನನಗೆ ನಂಬಿಕೆ ಇಲ್ಲ"ವೆಂದು  ಉತ್ತರಿಸಿದೆ.  ಅದಕ್ಕೆ  ಅವರು  -   ಪರವಾನಿಗೆ  ನವೀಕರಣ ಆಗದೆ ಮನೆಯಲ್ಲಿ ಇಟ್ಟುಕೊಳ್ಳುವಂತಿಲ್ಲ.  ಹಾಗಾಗಿ ಅದನ್ನು  ಪೋಲಿಸ್  ಠಾಣೆಯಲ್ಲಿ  ಇಡುತ್ತೇನೆ.  ಅದು ಸರಕಾರಕ್ಕಾಗಲಿ.  [ ಅಕಸ್ಮಾತ  ಬೇಕೆನಿಸಿದರೆ   ಲೈಸೆನ್ಸ್  ಮಾಡಿಸಿದ  ನಂತರ  ತರಬಹುದು.]     ನಾನು ಸಂತೋಷದಿಂದ  ಒಪ್ಪಿ  ಅಪ್ಪನನ್ನು   ವಿಟ್ಲದ    ಪೋಲಿಸ್ ಠಾಣೆಗೆ ಕರೆದುಕೊಂಡು   ಹೋದೆ.   “ನಣ  ಇಂದು  ನಿಕ್ ಳೆಗ್  “   ಅಂತ   ಹೇಳಿ  ಅವರು  ಅದನ್ನು  ಅಲ್ಲಿ  ಒಪ್ಪಿಸಿಬಂದರು.  ಇದು ಇಪ್ಪತ್ತು  ಇಪ್ಪತ್ತ  ನಾಲ್ಕು   ವರ್ಷ  ಹಿಂದಿನ  ಮಾತು. 

ಪುಣ್ಯಕ್ಕೆ  ಇದರ  ಮೇಲೆ  ಕಣ್ಣಿಟ್ಟಿದ್ದ  ಖರೀದಿಸುವ  ಆಸಕ್ತಿ ಇದ್ದ  ಯಾರಿಗೂ  ಇದರ  ಸುಳಿವು ಸಿಗಲಿಲ್ಲ.  ಅಕಸ್ಮಾತ್  ಗೊತ್ತಾದರೆ  ನಾವು  ತುಂಬಾ   ಒತ್ತಡಕ್ಕೆ  ಒಳಗಾಗುತ್ತಿದ್ದೆವು.  ಖಾಸಗಿ  ಸಂಗ್ರಹದಿಂದ  ಒಂದು  ಕೋವಿ  ಸರಕಾರಕ್ಕೆ  ಹೋದದ್ದು  ನನಗೆ ಸಂತಸದ  ವಿಚಾರವೇ.   

ಗೆಳೆಯ  ನಾರಾಯಣ  ಮೂರ್ತಿ  ಹೇಳಿದ ಒಂದು  ಕಥೆ   ನೆನಪಾಗುತ್ತದೆ.  ಹಿಂದೆ  ಕೋವಿ  ಇಟ್ಕೊಳ್ಳುವುದು  ನಿರ್ಬಂದ   ಇದ್ದ  ಮಹಾಯುದ್ದದ  ಸಮಯ.   ಹಾಗೆ  ಒಮ್ಮೆ ಪರವಾನಿಗೆ  ಇಲ್ಲದ  ಕೋವಿ  ಇರುವ ಗುಮಾನಿಯಲ್ಲಿ ಪೋಲಿಸರು ದಾಳಿ  ಒಂದು ಮನೆಗೆ  ಮಾಡಿದರು. ಇಡೀ ಮನೆ   ಜಾಲಾಡಿದರೂ   ಕೋವಿ ಸಿಗಲಿಲ್ಲ. ಮನೆಯಲ್ಲಿರುವ  ಪುಟ್ಟ  ಹುಡುಗನ ಪೋಲಿಸ  ಇನ್ ಸ್ಪೆಕ್ಟರ್   ಪುಸಲಾಯಿಸಿದರು.  ತಾವು  ಹುಡುಕುತ್ತಿರುವ  ಸಾಮಾನಿನ  ಆಕಾರ  ಹೇಳಿದರು.   ಹುಡುಗ  ಚುರುಕಾದ  “ ಟಪೋ  ಅನ್ನೋದಾ  ನೀವು ಹುಡುಕಿತ್ತಿರುವುದು.  ಅದು ನನಗೆ ಗೊತ್ತು “ ಎಂದು   ಮಾಡಿನ  ಮರೆಯಲ್ಲಿ ಅಡಗಿಸಿಟ್ಟಿದ್ದ  ಕೋವಿ  ತೋರಿಸಿದ.  ಆ ಹುಡುಗ  ಮುಂದೆ  ಊರ ಶಾಲೆ  ಮಾಸ್ತರ್ ಆದ  ನಂತರ  ಪುಂಡ ಹುಡುಗರ  ಬಾಯಲ್ಲಿ “  ಟಪೊ “ ಮಾಸ್ತರರಾದ.   

ದೆಹಲಿಯ  ಹೊರವಲಯದ  ಗಜಿಯಾಬಾದಿನಲ್ಲಿ   ಐದು ಸಾವಿರ ಕೋವಿ ಪೋಲಿಸರಲ್ಲಿ  ಇದ್ದರೆ  ಇಪ್ಪತ್ತು ಸಾವಿರ ಕೋವಿ ಲೈಸೆನ್ಸುದಾರರಲ್ಲಿಯೇ ಇದೆ   ಎನ್ನುತ್ತದೆ  ಇಂಗ್ಲೇಂಡಿನ ಪತ್ರಿಕೆಯ  ವರದಿ.    ಲೆಕ್ಕಕ್ಕೆ  ಸಿಗಗಿದುರುವುದು  ಎಷ್ಟೋ,  ಯಾರಿಗೂ  ಗೊತ್ತಿಲ್ಲ.. ನನ್ನಕ್ಕನ  ಮಗ  ಬಿಹಾರದ  ಕಾಲೇಜಿನ  ವಿದ್ಯಾರ್ಥಿಯಾಗಿರುವಾಗ  ಹೇಳುತ್ತಿದ್ದ.  "ಮಾವ,  ಅಲ್ಲೆಲ್ಲ  ’ ಕಟ್ಟಾ ’  ಊರಲ್ಲಿ ತಯಾರದ  ಪಿಸ್ಟೂಲ್  ಹೊಂದುವುದು  ಮಾಮೂಲಿ.   ಕೆಲವೊಮ್ಮೆ  ಹುಡುಗರು  ಶಾಲೆಗೂ  ತರುತ್ತಾರೆ. "

ಪೊಂಟಿ  ಚಡ್ಡಾ ಎನ್ನುವಾತ  ಉತ್ತರ  ಪ್ರದೇಶದ   ಮದ್ಯದ  ದೊರೆ.   ಅವನಿಗೆ ಹಲವು  ಕೋವಿಗಳ  ಪರವಾನಿಗೆ  ಇತ್ತು.     ಸಹೋದರನೊಂದಿಗೆ   ಪಾಲಿನ  ವಿಚಾರ  ಜಗಳ.  ಏನಾದರೂ  ಒಪ್ಪಂದಕ್ಕೆ  ಬರೋಣ  ಅಂತ  ಸೇರಿದರು,  ಇಬ್ಬರ  ಜತೆಯೂ   ದೊಡ್ಡ    ಬೆಂಗಾವಲು ಪಡೆ,    ಹಲವು  ಕೋವಿ ಹಿಡಕೊಂಡ  ರಕ್ಷಕರು.   ಮಾತುಕಥೆ  ಮದ್ಯೆ  ಯಾರೋ ಹಿತೈಶಿಗಳು [?]    ಮೊದಲ ಗುಂಡು ಹಾರಿಸಿ  ಗುಂಡು ಕಾಳಗ ಸುರುಮಾಡಿದರು.   ಗುಂಡಿನ  ಸದ್ದು ನಿಲ್ಲೊವಾಗ  ಪೊಂಟಿ  ಮತ್ತವನ  ಸಹೋದರ  ಇಬ್ಬರೂ  ಹೆಣವಾಗಿ ಮಲಗಿದ್ದರು. 





ನಮ್ಮಲ್ಲಿ  ಕೊಡವರಂತೆ    ಹಲವು ಜನಾಂಗಕ್ಕೆ   ಕೋವಿ ಎಂದರೆ  ಹೆಮ್ಮೆಯ ವಿಚಾರ.  ಅವರ ಕೈಯಿಂದ  ಕೋವಿ ಕಸಿದುಕೊಳ್ಳುವುದು ಕಷ್ಟ ಸಾದ್ಯ.     ಅತಿ  ಹೆಚ್ಚು  ನಾಗರಿಕರ  ಕೈಯಲಿ ಕೋವಿ  ಇರುವ  ಪಟ್ಟಿಯಲ್ಲಿ    ನಮ್ಮ  ದೇಶ  ಎರಡನೆ  ಸ್ಥಾನದಲ್ಲಿದೆಯಂತೆ   ಅಲ್ಲ  ಆಕ್ರಮ  ಕೋವಿಗಳ  ಸೇರಿಸಿದರೆ  ಮೊದಲನೆಯದೋ  ?    ನನ್ನ  ಗ್ರಾಮದಲ್ಲಿಯೇ  ಒಬ್ಬ   (ಕು)ಖ್ಯಾತ   ಅಕ್ರಮ  ಕೋವಿ  ತಯಾರಕನಿದ್ದಾನೆ.  ಅವನು ಹಲವು ಬಾರಿ  ಪೋಲಿಸರು ಹಿಡಿದರೂ   ವ್ಯಾಪಾರ ಲಾಬ  ಅವನನ್ನು  ಸಂಪೂರ್ಣ  ತ್ಯಜಿಸಲು ಬಿಡುವುದಿಲ್ಲ.  

ಸಂಪೂರ್ಣ ಕೋವಿ  ನಿವಾರಣೆ  ಸಾದ್ಯವಿಲ್ಲದ ವಿಚಾರ  ಬಿಡಿ.   ಆದರೂ  ನನ್ನದೊಂದು ಪ್ರಶ್ನೆ -  ನಮಗೆ ಬಂದೂಕು  ಸಂಸ್ಕೃತಿ  ಬೇಕಾ  ?   ನಾವು  ಮನೆಯಲ್ಲಿ  ಕೋವಿ ಇಟ್ಟುಕೊಳ್ಳಬೇಕಾ  ?  

Sunday, December 16, 2012

ಲಕ್ಷ ಜನರಿಗೆ ವಿದ್ಯುತ್ ಕೊಡುವ ಅಜ್ಜಿ ಕಥೆ


ಸೌರ  ವಿದ್ಯುತ್ ಅಥವ   ಪರಿಸರಪೂರಕ  ವಿದ್ಯುತ್  ಉತ್ಪಾದನೆ   ಎಲ್ಲ  ಕನಸಿನ  ಮಾತು, ಅಸಂಬದ್ದ  ಆಲೋಚನೆ   ಅದೆಲ್ಲ  ಆಗುವುದಿಲ್ಲ  ಹೋಗುವುದಿಲ್ಲ  ಎನ್ನುವ  ತರ್ಕ  ನಮ್ಮ  ಸಮಾಜದ   ಹೆಚ್ಚಿನ  ಪಾಲು  ಜನರದ್ದು.   ಆದರೆ  ಇವೆಲ್ಲ  ನಿಜವಾಗಿಸಿದ  ಕಂಪೇನಿ  ಜರ್ಮನಿಯಲ್ಲಿದೆ.   ಇದರ   ಮುಖ್ಯಸ್ಥೆ   ರಾಜದಾನಿಯಲ್ಲಿ ನೆಲೆಸಿಲ್ಲ , ದುಬಾರಿ ಕಾರಿನಲ್ಲಿ  ಓಡಾಡುವುದಿಲ್ಲ ,  ಎಮ್ ಬಿ ಎ  ಕಲಿತಿಲ್ಲ.      ಪ್ರಾಥಮಿಕ  ಶಾಲಾ  ಶಿಕ್ಷಕಿ  ಅಂದರೆ   ಗೊತ್ತಲ್ಲಾ  -     ಪುಟ್ಟ  ಮಕ್ಕಳಿಗೆ   ಅ  ಆ  ಇ ಈ …. ಕಲಿಸೋದು    ಅವರ  ಶೈಕ್ಷಣಿಕ  ಅರ್ಹತೆ.  ಮಕ್ಕಳ ಬವಿಷ್ಯದ  ಬಗೆಗಿನ  ಕಾಳಜಿ  ಐದು ಮಕ್ಕಳ   ಬೆಳೆಸುವುದರಲ್ಲೇ  ನಿರತಳಾಗಿದ್ದ  ಈ  ಮಹಿಳೆಯನ್ನು ಮನೆಯಿಂದ  ಹೊರಗೆಳೆಯಿತು. :rainbow 

ಚೆರ್ನೋಬಿಲ್  ಅಣುವಿದ್ಯುತ್ ಕೇಂದ್ರದಲ್ಲಿ  ಅಪಘಾತವಾಗದಿದ್ದರೆ   ಉರ್ಸುಲಾ    ಸ್ಲಾಡೆಕ್  ಈಗ  ಮೊಮ್ಮಕ್ಕಳ  ನೋಡಿಕೊಳ್ಳುತ್ತಾ  ಇದ್ದರು.  ಅಪಘಾತವಾದುದು  ಎರಡು ಸಾವಿರ  ಕಿಮಿ ದೂರವಾದರೂ  ವಿಕಿರಣ  ಇವರ  ಪರಿಸರದಲ್ಲೆಲ್ಲ  ಹರಡಿ ಬಿದ್ದಿತ್ತು.    ನನ್ನ  ಮಕ್ಕಳು  ಸೊಪ್ಪುತರಕಾರಿ  ತಿನ್ನಬಹುದೋ / ನಮ್ಮ  ಹಾಲು  ಕುಡಿಯಬಹುದೋ  ಇತ್ಯಾದಿ  ಯೋಚನಗೆ  ಕೂರುವಂತಾಯಿತು.   ಸರಕಾರ  ಹಾಲಿನ  ಹುಡಿ  ಉಪಯೋಗಕ್ಕೆ  ಸೂಚನೆಕೊಟ್ಟಿತ್ತು.   ಮನೆಯಲ್ಲಿ    ಐದು  ಮಕ್ಕಳಿದ್ದು    ಮುಂದೆ   ಅವರು  ಜೀವಿಸಲಿರುವ  ಪ್ರಪಂಚದ ಬಗೆಗೆ ಚಿಂತಿಸದೆ  ಇರಲು ಸಾದ್ಯವಾಗಲಿಲ್ಲ.   ಮೊದಲು   ಪ್ರಾಥಮಿಕ  ಶಾಲೆ  ಶಿಕ್ಷಕಿಯಾಗಿದ್ದ   ಸ್ಲಾಡೆಕ್,  ವೈದ್ಯರಾದ    ಅವಳ  ಗಂಡ  ಮತ್ತು   ಅದೇ ರೀತಿಯಲ್ಲಿ ಚಿಂತಿಸುವ   ಜನ  ಸೇರಿ   ಅಣುವಿದ್ಯುತ್  ವಿರೋದಿಸುವ  ಪೋಷಕರ  ತಂಡವನ್ನು  ಕಟ್ಟಿದರು.   



ಆ  ಕಾಲದಲ್ಲಿ  ಜರ್ಮನಿಯ  ವಿದ್ಯುತ್  ಬೇಡಿಕೆ  ಅಣು ವಿದ್ಯುತ್ ಹಾಗೂ  ಕಲ್ಲಿದ್ದಲ್ಲು  ಕೆಂದ್ರಗಳಿಂದ  ಪೊರೈಸಲಾಗುತಿತ್ತು.  ಪರ್ಯಾಯಗಳನ್ನು ಇವರು ಚಿಂತಿಸಲಾರಂಬಿಸಿದರು.   ನೆನಪಿರಲಿ.  ಇವರಿದ್ದುದ್ದು  ಪುಟ್ಟ  ಹಳ್ಳಿ -  ಒಟ್ಟು  ಜನಸಂಖ್ಯೆ  ಬರೇ   ಎರಡು ಸಾವಿರದ  ಮುನ್ನೂರು.  ತಮ್ಮ  ಊರಲ್ಲಿ ಹಲವು   ಸಣ್ಣ  ಪುಟ್ಟ   ಜಲವಿದ್ಯುತ್  ಕೆಂದ್ರಗಳು ನಿಷ್ಕ್ರೀಯವಾಗಿರುವುದರ  ಕಂಡರು.  ಊರ  ವಿದ್ಯುತ್   ಸರಬರಾಯಿ ಕಂಪೇನಿಗೆ   ಅದನ್ನು  ಪುನಶ್ಚೇತನದ ಬಗ್ಗೆ  ವಿನಂತಿಸಿದರೆ “  ನೀನು ಸುಮ್ನೆ  ಕೂತ್ಕೊಳ್ಳಮ್ಮ,  ವಿದ್ಯುತ್  ಬಗೆಗೆ   ನಿನಗೇನು ಗೊತ್ತು “ ಎಂಬ ಹೀಯಾಳಿಕೆ  ಕೇಳಿದರು. :(

ಆದರೆ ಇವರು ಸುಮ್ಮನೆ ಕೂರಲಿಲ್ಲ.   ಇಂದು ಹಿಂತಿರುಗಿ ನೋಡಿದರೆ    ಇವರು  ನಡೆದು ಬಂದ  ದಾರಿ  ಸುಗಮವಾಗಿತ್ತು  ಅನ್ನುವಂತಿಲ್ಲ.     ಸಾಕಷ್ಟು  ಕಲ್ಲು ಮುಳ್ಳಿನ   ಹೊಸ ದಾರಿ.  ವಿಘ್ನಗಳ  ಲೆಕ್ಕಿಸದೆ  ಮುನ್ನಡೆದರು.  ತಮ್ಮ  ತಂಡವ  ಮುನ್ನಡೆಸಿದರು.  ಎರಡು  ಬಾರಿ  ಪ್ರಜಾನಿರ್ಧಾರ  ನಡೆಯಿತು.  ಕೊನೆಗೂ  ಈ ಗುಂಪಿಗೆ  ಜಯವಾಯಿತು.     ಊರ  ವಿದ್ಯುತ್  ಕಂಪೇನಿ  ಕರಾರು ಮುಗಿದು   ಪುನರ್ನಕರಣ   ಸಮಯದಲ್ಲಿ    ತಮ್ಮ  ತಂಡದಿಂದ   ಕರಾರು  ಪಡಕೊಳ್ಳಲು ಅರ್ಜಿ  ಹಾಕಿದರು,   ದಕ್ಕಿಸಿಕೊಂಡರು. 



ತಮ್ಮ    ಊರಲ್ಲಿ   ಪರಿಸರಪೂರಕ ವಿದ್ಯುತ್    ಸರಬರಾಜು  ಎಂದಾಗ  ದೂರದ   ಊರಿನವರೂ  ಅವರಿಗೆ ಹೇಳಿದರು – ನಮ್ಗೂ  ನೀವೇ  ವಿದ್ಯುತ್ ಕೊಡಿ.  ಜರ್ಮನಿಯ  ಕಾನೂನಿನ ಪ್ರಕಾರ  ನಾವು ಸರಬರಾಜು ಕಂಪೇನಿ ಆಯ್ದುಕೊಳ್ಳಬಹುದು.  ಹಾಗೆ ಅದು  ಪುಟ್ಟ  ಹಳ್ಳಿಯ ಗಡಿ  ದಾಟಿ  ದೇಶವ್ಯಾಪ್ತಿ ಉದ್ಯಮವಾಗಿ ಬೆಲೆಯಿತು.   ದೂರದೂರಿನ  ಸೌರ  ಮತ್ತು ಇನ್ನಿತರ  ರಿನ್ಯೂವೆಬಲ್  ಶಕ್ತಿ  ತಯಾರಕರೂ  ಇವರಿಗೆ  ಮಾರಲು  ಒಪ್ಪಿದರು.   ಹಾಗೆ  ಇಂದು  ಒಂದೂ  ಕಾಲು   ಲಕ್ಷಕ್ಕೂ  ಮಿಕ್ಕಿ  ಇವರ  ಕಂಪೇನಿಯ  ಸಂತೃಪ್ತ  ಗ್ರಾಹಕರು. :)   ಹರಿಯುವ  ನೀರು,  ಬೀಸುವ  ಗಾಳಿ,  ಮನೆ  ಬಿಸಿ ಮಾಡುವ  ಇಂಜಿನು  ಹಾಗೂ  ಬೆಳಗುವ  ಸೂರ್ಯ  -    ಇವಷ್ಟೇ  ಕಂಪೇನಿ ಶಕ್ತಿ ಮೂಲಗಳು.   ಉಳಿದ     ಅಣು  ವಿದ್ಯುತ್   ಉಷ್ಣ ವಿದ್ಯುತ್   ಕಂಪೇನಿಗಳ  ಜತೆಯಲ್ಲಿ  ಮಾರುಕಟ್ಟೆಯಲ್ಲಿ   ಯಶಸ್ವಿಯಾಗಿ    ಸ್ಪರ್ಧಿಸುತ್ತಿದ್ದಾರೆ. 

ದಯಮಾಡಿ  ಈ  ಮೇಲಿನ      ವಾಕ್ಯಗಳನ್ನು  ನಮ್ಮಲ್ಲಿರುವ  ತಜ್ಞರು   ಓದಬಾರದಾಗಿ  ಕೋರಿಕೊಳ್ಳುತ್ತೇನೆ.  ಯಾಕೆಂದರೆ  ಅವರ  ತಲೆ  ಹಾಳಾಗುವುದು  ಬೇಡ. :@ 

ಮೊದಲು  ಚಳಿಗಾಲದಲ್ಲಿ ಮನೆಬಿಸಿ  ಮಾಡಲು  ಒಲೆ ಉರಿಸುತ್ತಾ  ಇದ್ದರು.    ಈಗ  ಪುಟ್ಟ  ಇಂಜಿನು ಬಳಸುತ್ತಾರೆ.  ಅದರಲ್ಲಿ  ತಯಾರಾದ  ವಿದ್ಯುತ್   ಅನ್ನು   ವಿದ್ಯುತ್ ಜಾಲಕ್ಕೆ  ಸೇರಿಸಿದರೆ,  ಹೊಗೆಯ  ನಿರುಪಯುಕ್ತವೆಂದು   ಪರಿಗಣಿಸುವ  ಶಾಖವಿದೆಯಲ್ಲ  ಅದು ಮನೆಯನ್ನು ಬಿಸಿ  ಮಾಡುತ್ತದೆ.    ಈ  ಬಗೆಗೆ  ನಾನು ತಿಂಗಳ  ಹಿಂದೆ   ಈ  ವಿಚಾರ     ಬರೆದಿದ್ದೆ. 


ಸಾದ್ಯವಾದಷ್ಟು  ಉಳಿಸಿ  
ಅಂದರೆ   ಅನಿವಾರ್ಯ  ಅನಿಸುವಷ್ಟೇ  ಬಳಸಿ.
ಸ್ಥಳೀಯವಾಗಿ ಉತ್ಪಾದಿಸಿ. 
ಉಳಿದುದನ್ನು ಜಾಲಕ್ಕೆ ರವಾನಿಸಿ.

ಎನ್ನುವ  ಘೋಷಣೆ  ಇವರ   ಕಂಪೇನಿಯದು.  ಏಳು ಜನ ಮೊಮ್ಮಕ್ಕಳು  ಅಜ್ಜಿಯ   ಸಮಯ  ಬೇಡುವುದಾದರೂ   ಇವರು  ಇನ್ನೂ  ಸಾಗಬೇಕಾದ   ಮುಂದಿನ  ದಾರಿ  ಬಗೆಗೆ   ಉತ್ಸಾಹಕವಾಗಿಯೇ  ಇದ್ದಾರೆ.  ಮುಂದಿನ ಎರಡು ವರ್ಷದಲ್ಲಿ ಹತ್ತು  ಲಕ್ಷ  ಗ್ರಾಹಕರ  ಗುರಿ  ಅಜ್ಜಮ್ಮ  ಅವರದ್ದು.  ಅವರಿಗೆ  ಜೈ   ಅನ್ನೋಣ. :tup 


ಕಾನೂನು  ಮಾಡುವ    ಮಟ್ಟಿಗೆ  ನಾವು  ಹಿಂದುಳಿದಿಲ್ಲ.    ನಮ್ಮಲ್ಲೂ  ಇದೆ -  ಕಾಂಪ್ಕೊ   ವಿದ್ಯುತ್  ಗಿರಿಗಿಟಿ  ಇರುವುದು  ಗದಗದಲ್ಲಿ . ಅಲ್ಲಿ ತಯಾರಾಗುವ ವಿದ್ಯುತ್  ಬಳಕೆಯಾಗುವುದು  ಪುತ್ತೂರಿನ   ಕಾರ್ಖಾನೆಯಲ್ಲಿ.   ಇದಕ್ಕೆ    ಸಾಗಾಣಿಕೆ  ವೆಚ್ಚ  ಮೆಸ್ಕೋಂ  ಪಡಕೊಳ್ಳುತ್ತದೆ.   ಆದರೆ  ಇದು ಜನಸಾಮನ್ಯರಿಗೆ ತಲಪುವ  ಮಟ್ಟದಲ್ಲಿಲ್ಲ.  ದೊಡ್ಡ  ಕಂಪೇನಿಗಳಿಂದ  ನಮ್ಮನ್ನು  ಆಳುವವರಿಗೆ    ಚೆಕ್  ಈಸ್ಕೊಳ್ಳೋದು  ಸುಲಭ.   ಬೇಕಾದರೆ  ಯೆಡ್ಡಿನ  ಕೇಳಿ.  :)       ಸಾಮಾನ್ಯ   ಜನರಿಗೆ ಬಾಯಿಉಪಚಾರ  ಸಾಕು.  


ಅಲ್ಲಿ     ಎಲ್ಲ    ವಿದ್ಯುತ್  ಬಳಕೆದಾರರು  ಕೊಡುವ  ಒಂದು  ಅಧಿಕ  ತೇರಿಗೆಯನ್ನು  ಈ  ಪರಿಸರ ಸ್ನೇಹಿ ಉತ್ಪಾದಕರಿಗೆ  ಹಂಚಲಾಗುತ್ತದೆ.   ಈ  ಲೆಕ್ಕಾಚಾರ  ಪಾರದರ್ಶಕವಾಗಿದ್ದು  ರಾಜಕಾರಣಿಗಳು  ಮೂಗು  ತೂರಿಸುವಂತಿಲ್ಲ,   ಕುತಂತ್ರ  ನಡೆಸುವಂತಿಲ್ಲ.        ಅವರಿಗೆ  ಸಾದ್ಯವಾಗೋದು  ನಮಗೇಕೆ    ಅಸಾದ್ಯ  ? ಯಾಕೆಂದರೆ,  ಮುಜುಗರ  ಆಗುತ್ತದೆ  ಹೇಳಲು  -   ಲಗಾಡಿ  ತೆಗೆಯಲು    ಅವರ   ಮದ್ಯೆ   ಎಲ್ಲವನ್ನೂ   ಮುಕ್ಕುವ. :@   ಅಲ್ಲಲ್ಲ -  ಸಮಾಜಕ್ಕೆ      ಅನುಗ್ರಹಿಸುವ   ಜನಪರ  ಹೋರಾಟಗಾರ   ಯೆಡ್ಡಿ  ಕರಂಟ್ ಲಾಜೆ   ಜೋಡಿ   ಇಲ್ಲ. ;)

ವಿಡಿಯೊ  ಬಲಬಾಗ  ಮುಚ್ಚಿರುವ    ಕಾರಣ      ಮೇಲಿನ  ವಿಡಿಯೊ ಯುಟ್ಯೂಬ್ ನಲ್ಲಿಯೇ  ನೋಡಲು  ಕೊಂಡಿ